ಬೆಳ್ತಂಗಡಿ : ಲಾೖಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ನವೀ ಕರಣ, ಪುನಃಪ್ರತಿಷ್ಠೆ, ಅಷ್ಟಬಂಧ- ಬ್ರಹ್ಮಕಲ ಶೋತ್ಸವಕ್ಕೆ ಬುಧವಾರ ನಡ ಹಾಗೂ ಲಾೖಲದ ಸಾವಿರಾರು ಗ್ರಾಮಸ್ಥರು ಕುತ್ಯಾರು ಕ್ಷೇತ್ರದಿಂದ ಬೆಳ್ತಂಗಡಿ ಪೇಟೆಯಾಗಿ ಬೃಹತ್ ಮೆರವಣಿಗೆ ಮೂಲಕ ಹಸುರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.
ಬೆಳಗ್ಗೆ 10ಕ್ಕೆ ಕುತ್ಯಾರು ದೇವಸ್ಥಾನದಿಂದ ನೂರಾರು ಸ್ವಯಂಸೇವಕರ ನೇತೃತ್ವದಲ್ಲಿ ಮಹಿಳೆಯರು ಪೂರ್ಣಕುಂಭ ಕಲಶ ಹಿಡಿದು ಹೆಜ್ಜೆಹಾಕಿದರು. ಇದಕ್ಕೂ ಮುನ್ನ ದೇಗುಲದ ಮುಂಭಾಗ ಕುತ್ಯಾರು ಶ್ರೀ ಸೋಮನಾಥೇಸ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜವರ್ಮ ಬಳ್ಳಾಲ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು.
ಬೆಳ್ತಂಗಡಿ ಶಾಸಕ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಆಡಳಿತ ಮೊಕ್ತೇಸರ ಎನ್. ಧನಂಜಯ ಅಜ್ರಿ ನಡಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ. ವಿಟuಲ ಶೆಟ್ಟಿ, ಧ.ಗ್ರಾ. ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಯಶಂಕರ ಶೆಟ್ಟಿ ಪೆಂರ್ದಿಲೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭೂಷಣ್ ಕಡಂಬ ನಡಗುತ್ತು, ಪ್ರಧಾನ ಕಾರ್ಯದರ್ಶಿ ಗಿರೀಶ್ ಡೋಂಗ್ರೆ, ಕೋಶಾಧಿಕಾರಿ ಸುಬ್ರಾಯ ಡೋಂಗ್ರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಧನಂಜಯ ರಾವ್, ಪ್ರಚಾರ ಸಮಿತಿಯ ಸಂಚಾಲಕ ಪ್ರಸಾದ್ ಶೆಟ್ಟಿ ಎಣಿಂಜೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿಗಳಾದ ವಸಂತ ಸುವರ್ಣ, ರಾಜೇಶ್ ಶೆಟ್ಟಿ, ಅಲೋಕ್ ಅಜ್ರಿ,