Home ಧಾರ್ಮಿಕ ಸುದ್ದಿ ಹನುಮಗಿರಿ: ಶ್ರೀ ಪಂಚಮುಖೀ ಆಂಜನೇಯ ಕ್ಷೇತ್ರ ಸಹಸ್ರ ದೀಪಾಲಂಕಾರ, ಪವಮಾನ ರಥೋತ್ಸವ

ಹನುಮಗಿರಿ: ಶ್ರೀ ಪಂಚಮುಖೀ ಆಂಜನೇಯ ಕ್ಷೇತ್ರ ಸಹಸ್ರ ದೀಪಾಲಂಕಾರ, ಪವಮಾನ ರಥೋತ್ಸವ

2246
0
SHARE

ಈಶ್ವರಮಂಗಲ: ಹನುಮಗಿರಿ ಕ್ಷೇತ್ರದಲ್ಲಿ ಜಾತ್ರೆಯು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿದ್ದು, ಬುಧವಾರ ರಾತ್ರಿ ಶ್ರೀ ಪಂಚಮುಖೀ ಆಂಜನೇಯ ಕ್ಷೇತ್ರದಲ್ಲಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಅನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಬೆಳಗ್ಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ಕ್ಷೇತ್ರದ ಮಹಾಪೋಷಕ ಜಿ.ಕೆ. ಮಹಾಬಲೇಶ್ವರ ಭಟ್‌, ಕ್ಷೇತ್ರ ಆಡಳಿತ ಧರ್ಮದರ್ಶಿ
ನನ್ಯ ಅಚ್ಯುತ ಮೂಡಿತ್ತಾಯ, ಧರ್ಮದರ್ಶಿಗಳಾದ ಶಿವರಾಮ ಪಿ., ಶಿವರಾಮ ಶರ್ಮ ಉಪಸ್ಥಿತರಿದ್ದರು.

ಇಂದು ಹನುಮ ಜಯಂತಿ

ಇಂದು ಹನುಮ ಜಯಂತಿ, ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ, ಅನ್ನ ಸಂತರ್ಪಣೆ ನಡೆಯಲಿದೆ.
ಶ್ರೀ ಕೋದಂಡರಾಮ ಕ್ಷೇತ್ರ ಮತ್ತು ಆಂಜನೇಯ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಭಜನ ಸ್ಪರ್ಧೆ ಏಕಕಾಲದಲ್ಲಿ ಅಪರಾಹ್ನ 2 ಗಂಟೆಯಿಂದ ನಡೆಯಲಿದೆ

LEAVE A REPLY

Please enter your comment!
Please enter your name here