ತೆಕ್ಕಟ್ಟೆ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನ. 15 ಶುಕ್ರವಾರ ಕಾರ್ತಿಕ ಸಂಕಷ್ಟಹರ ಚತುರ್ಥಿ ಪೂರ್ವಾಹ್ನ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಪತಿಯಾಗ, ಸುವರ್ಣಪಾಲಿಕೆ, ರಜತ ರಥ, ರಂಗಪೂಜಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನಡೆಯಿತು.
ಸಂಜೆ ಭಕ್ತಿ ಸಂಗೀತ ಮತ್ತು ಅಭಿವೃದ್ಧಿ ಸಂಸ್ಥೆ ಬಾಳುRದ್ರು ಇಲ್ಲಿನ ಮಕ್ಕಳಿಂದ ಭಕ್ತ ಸುಧನ್ವ ಯಕ್ಷಗಾನ ಪ್ರದರ್ಶನಗೊಂಡಿತು. ಈ ಸಂದರ್ಭ ದೇಗುಲದ ಹಿರಿಯ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ, ಪರ್ಯಾಯ ಅರ್ಚಕ ಚಂದ್ರಕಾಂತ್ ಉಪಾಧ್ಯಾಯ ಹಾಗೂ ಸಿಬಂದಿ ಉಪಸ್ಥಿತರಿದ್ದರು