ಮಂಗಳೂರು: ಜಿಲ್ಲೆಯ ಶ್ರೀ ಶಾರದಾ ಮಹೋತ್ಸವಗಳಲ್ಲಿ ಅತೀ ಪ್ರಸಿದ್ಧವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 97ನೇ ವರ್ಷದ ಕಾರ್ಯಕ್ರಮಗಳು ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇಗುಲದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ಶುಕ್ರವಾರ ಆರಂಭಗೊಂಡಿತು.
ಸಕಲ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮದೊಂದಿಗೆ ಶ್ರೀ ಶಾರದಾ ಮಾತೆಯ ವಿಗ್ರಹದ ಪ್ರತಿಷ್ಠಾಪನೆ ನೆರವೇರಿತು. 6 ದಿನಗಳ ಪರ್ಯಂತ ಶ್ರೀ ದೇಗುಲದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಡಾ| ಯು. ಉಮಾನಂದ ಮಲ್ಯ ತಿಳಿಸಿದ್ದಾರೆ.