ಪೆರಾಜೆ : ಸಾವಿರಾರು ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಭೂತಾರಾಧನೆ ಮೂಲಕ ದೇವಿಯ ಸ್ವರೂಪದಲ್ಲಿ ಕಾಣುವ ಪೆರಾಜೆ ದೊಡ್ಡಮುಡಿ ಉತ್ಸವ ಪ್ರತಿ ಸೋಮವಾರ ಪೆರಾಜೆ ಗ್ರಾಮದ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನಡೆಯಿತು.
ಕೇರಳ ಮತ್ತು ಕರ್ನಾಟಕದ ನಾನಾ ಭಾಗಗಳಿಂದ ಬಂದ ಸಾವಿರಾರು ಭಕ್ತರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಭಗವತಿ ದೇವಿಗೆ ಕಂಕಣ ಭಾಗ್ಯ, ಸಂತಾನ ಭಾಗ್ಯ ಹಾಗೂ ಇತರ ಕಾರ್ಯಗಳಿಗೆ ಹರಕೆ ಹೊತ್ತ ಭಕ್ತರು ತಮ್ಮ ಹರಕೆಯ ರೂಪದಲ್ಲಿ ಸೀರೆ, ಚಿನ್ನ, ಬೆಳ್ಳಿಗಳನ್ನು ಅರ್ಪಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ವೆಂಕಟ್ರಮಣ ಪಾಂಙnಣ್ಣಾಯ, ಆಡಳಿತ ಮೊಕ್ತೇಸರ ವಿಶ್ವನಾಥ ಕುಂಬಳಚೇರಿ, ದೇವತಕ್ಕ ರಾಜಗೋಪಾಲ ರಾಮಕಜೆ, ಆಡಳಿತ ಕಾರ್ಯದರ್ಶಿ ಹೊನ್ನಪ್ಪ ಕೊಳಂಗಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಧನಂಜಯ ಕೋಡಿ, ಕಾರ್ಯದರ್ಶಿ ಅಶೋಕ ಪೀಚೆ, ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ದೇವಸ್ಥಾನದ ಮಾಜಿ ಮೊಕ್ತೇಸರರು, ಕಾರ್ಯದರ್ಶಿಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.