ಬಂಟ್ವಾಳ :ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಂಚಿ ಜಾತ್ರೆ ಧಾರ್ಮಿಕ ಸಭೆಯಲ್ಲಿ ಶ್ರೀ ಕೇಶವಾನಂದ ಭಾರತಿ ಸ್ವಾಮಿಗಳು ಆಶೀರ್ವಚನ ನೀಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಕಳೆದ ವರ್ಷ ದೇವಸ್ಥಾನದ ಅಭಿವೃದ್ಧಿ ಕೆಲಸಗಳು ನಡೆದು ಬ್ರಹ್ಮಕಲಶ ಆಗಿದೆ. ಇದರ ಹಿಂದೆ ಅನೇಕರ ಶ್ರಮ ಸಾಧನೆ ಇದೆ ಎಂದರು.
ಚಂದ್ರಹಾಸ ರೈ ಬಾಲಾಜಿಬೈಲು, ರವೀಂದ್ರ ಕುಕ್ಕಾಜೆ ಉಪಸ್ಥಿತರಿದ್ದರು. ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಸಭಾಧ್ಯಕ್ಷತೆ ವಹಿಸಿ ಪ್ರಸ್ತಾವನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾ ಶ್ಚಂದ್ರ ಶೆಟ್ಟಿ ಕುಳಾಲು ಸ್ವಾಗತಿಸಿ, ಚಿದಾನಂದ ರಾವ್ ಪತ್ತುಮುಡಿ ವಂದಿಸಿದರು.
ವಿಜಯ ಶೆಟ್ಟಿ ಸಾಲೆತ್ತೂರು ಕಾರ್ಯಕ್ರಮ ನಿರ್ವಹಿಸಿದರು.