ಪುಂಜಾಲಕಟ್ಟೆ: ಸುಮಾರು 3 ಕೋಟಿ ರೂ. ವೆಚ್ಚದಲ್ಲಿ, ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರೋಡಿಯಲ್ಲಿ ಬ್ರಹ್ಮ ಕಲಶೋತ್ಸವದ 4ನೇ ದಿನವಾದ ಸೋಮವಾರ ರಾತ್ರಿ ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ, ಕಕ್ಯ ಶ್ರೀನಿವಾಸ ಅರ್ಮುಡ್ತಾಯ ಮಾರ್ಗದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಮುಂದಾಳತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ರಾತ್ರಿ ದೈವಗಳ ಬಲಿ, ಶ್ರೀ ಕಡಂಬಿ ಲ್ತಾಯಿ, ಕೊಡಮಣಿತ್ತಾಯಿ ದೈವಗಳ ನೇಮ ನಡೆಯಿತು. ರಾತ್ರಿ ಧಾರ್ಮಿಕ ಸಭೆ ಬಳಿಕ ಬಲೇ ತೆಲಿಪಾಲೆ ಖ್ಯಾತಿಯ ಕಲಾವಿದರಿಂದ ಹಾಸ್ಯ ಹಬ್ಬ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ, ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೋಕ್ತೇಸರ, ಬಾರ್ದಡ್ಡು ಕುಟುಂಬಸ್ಥರಾದ ರಾಜವೀರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಾಧ್ಯಕ್ಷ ಬಿ. ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ವಾಸ್ತುಶಿಲ್ಪಿ ಪ್ರಮಲ್ ಕುಮಾರ್, ಪುನರ್ ನಿರ್ಮಾಣ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್ ಆಜೋಡಿ, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಉಳಿ ಯುವಕ ಮಂಡಲ ಅಧ್ಯಕ್ಷ ಸನತ್ ಕುಮಾರ್, ವಿವಿಧ ಸಮಿತಿಗಳ ಪದಾಧಿಕಾರಿಗಳು, ಭಾಗವಹಿಸಿದ್ದರು.