ಪುಂಜಾಲಕಟ್ಟೆ : ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಗರ್ಭಗುಡಿಯ ಶಿಲಾನ್ಯಾಸ ಕಾರ್ಯ ಕ್ರಮ ಗುರುವಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿಯವರು ಮುಖ್ಯ ಅತಿಥಿಯಾಗಿದ್ದ ದಿವ್ಯರೂಪ ಕನ್ಸ್ಟ್ರಕ್ಷನ್ಸ್ನ ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ ಅವರ ಉಪಸ್ಥಿತಿ ಯಲ್ಲಿ ಶಿಲಾನ್ಯಾಸ ನೆರವೇರಿಸಿದರು.
ಕ್ಷೇತ್ರದ ತಂತ್ರಿ ದಿನೇಶಕೃಷ್ಣ ತಂತ್ರಿ ವರ್ಕಾಡಿ ಧಾರ್ಮಿಕ ವಿಧಿವಿಧಾನ ಗಳನ್ನು ನೆರವೇರಿಸಿದರು. ಪುರೋಹಿತ ವಿಜಯಕೃಷ್ಣ ಐತಾಳ, ಅರ್ಚಕರಾದ ಶಂಕರನಾರಾಯಣ ಹೊಳ್ಳ, ಜಯ ರಾಮ ಕಾರಂತ ಸಹಕರಿಸಿದರು.
ಪ್ರಾರಂಭದಲ್ಲಿ ಶಿಲೆಕಲ್ಲನ್ನು ಶಾಂತಿಗುಡ್ಡೆಯಿಂದ ಮೆರವಣಿಗೆಯ ಮೂಲಕ ತರಲಾಯಿತು. ಬಳಿಕ ಬಾಲಾಲಯದ ಮುಂಭಾಗ ಪ್ರಾರ್ಥನೆ ನೆರವೇರಿಸಿ ಶಿಲಾನ್ಯಾಸ ನಡೆಸ ಲಾಯಿತು. ವಾಸ್ತುಶಿಲ್ಪಿ ಮಹೇಶ್ ಭಟ್ ಮುನಿಯಂಗಳ ಶುಭಹಾರೈಸಿದರು.
ಅತಿಥಿಗಳಾಗಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಸರಪಾಡಿ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಧರ್ಣಪ್ಪ ಪೂಜಾರಿ, ಮಣಿನಾಲ್ಕೂರು ಗ್ರಾ.ಪಂ. ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ, ಮಣಿನಾಲ್ಕೂರು ಸಿಎ ಬ್ಯಾಂಕ್ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಮೊದಲಾದವರು ಭಾಗವಹಿಸಿದ್ದರು.
ದೇಗುಲ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಕ್ಷೇತ್ರದ ಮೊಕ್ತೇಸರರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ದೇವಾಲಯಗಳ ನಿರ್ಮಾಣದ ಸಂದರ್ಭದಲ್ಲಿ ಭಕ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಇಂತಹ ಧಾರ್ಮಿಕ ತಾಣಗಳ ಉದ್ಧಾರದಿಂದ ದೇಶದಲ್ಲಿನ ಆತಂಕ ದೂರವಾಗಿ ಸುಭೀಕ್ಷೆ ನೆಲೆಸಲಿ. ಜತೆಗೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ಶೀಘ್ರ ನೆರವೇರಲಿ ಎಂದು ಶ್ರೀ ಮೋಹನದಾಸ ಸ್ವಾಮೀಜಿಯವರು ಅಶೀರ್ವಚನ ನೀಡಿದರು.
ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ ಮಾತನಾಡಿ, ಊರವರು ಒಗ್ಗಟ್ಟಾದಾಗ ಯಾವುದೇ ಕಾರ್ಯ ಸುಸೂತ್ರವಾಗಿ ನೆರವೇರಲಿದೆ ಎಂದು ಕ್ಷೇತ್ರಕ್ಕೆ ಸಹಕಾರದ ಭರವಸೆ ನೀಡಿದರು.