ಪುಂಜಾಲಕಟ್ಟೆ : ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಬ್ರಹ್ಮ ಕಲಶೋತ್ಸವದ ಮೂರನೇ ದಿನವಾದ ರವಿವಾರ ರಾತ್ರಿ ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಕಕ್ಯ ಶ್ರೀನಿವಾಸ ಅರ್ಮುಡ್ತಾಯ ಅವರ ಮಾರ್ಗ ದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.ಸಂಜೆ ಕಕ್ಯಗುತ್ತು ಬೋಂಟ್ರರ ಮನೆಯಿಂದ ದೈವೋಂಕುಳ ಭಂಡಾರ ಬಂದು ನೇಮ, ಸಂಕ್ರಾತಿ ಸೇವೆಗಳು ನಡೆದವು.
ರಾತ್ರಿ ಧಾರ್ಮಿಕ ಸಭೆ ಬಳಿಕ ನಡೆದ ಹೆಜ್ಜೆನಾದ ನೃತ್ಯ ಸಂಗೀತ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಡು ಹಾಡಿ, ನೃತ್ಯಕ್ಕೆ ಹೆಜ್ಜೆ ಹಾಕಿ ಕಾರ್ಯಕ್ರಮದ ಆಕರ್ಷಣೆಯಾದರು.
ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೊಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಾಧ್ಯಕ್ಷ ಬಿ. ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ವಾಸ್ತುಶಿಲ್ಪಿ ಪ್ರಮಲ್ ಕುಮಾರ್, ಪುನರ್ ನಿರ್ಮಾಣ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್ ಆಜೋಡಿ, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ ಮತ್ತಿತರ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.